ಶಿವಮೊಗ್ಗ: ಕರ್ನಾಟಕ ರಾಜ್ಯ ಸಾರ್ವತ್ರಿಕ ಚುನಾವಣೆ ಹಿನ್ನಲೆ;ಶಿವಮೊಗ್ಗ ಜಿಲ್ಲೆಯಾದ್ಯಂತ ನಾಖಾಬಂಧಿ; ವಾಹನಗಳ ತಪಾಸಣೆ ವೇಳೆ ಸೂಕ್ತ ದಾಖಲೆಗಳಿಲ್ಲದೆ ಸಾಗಾಟ ಮಡುತ್ತಿದ್ದ ವಸ್ತುಗಳ ಅಮಾನತು.

 ಮುಂಬರುವ ಕರ್ಣಾಟಕ ರಾಜ್ಯ ಸಾರ್ವತ್ರಿಕ ಚುನಾವಣೆಯ ಹಿನ್ನಲೆಯಲ್ಲಿ, ಶಿವಮೊಗ್ಗ ಜಿಲ್ಲೆಯಾದ್ಯಂತ ನಾಖಾಬಂಧಿ (ಚೆಕ್ ಪೋಸ್ಟ್ ಗಳನ್ನು) ತೆರೆದು ವಾಹನಗಳ ತಪಾಸಣೆಯನ್ನಿ ನಡೆಸುತ್ತಿದ್ದು, ಸೂಕ್ತ ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ ಈ ಕೆಳಕಮ್ಡ ವಸ್ತುಗಳನ್ನು ಅಮಾನತ್ತು ಪಡಿಸೊಕೊಳ್ಳಲಾಗಿದೆ.


1. ದಿನಾಂಕ 22/03/2023 ರಂದು ಆಗುಂಬೆ ಠಾಣಾ  ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೃಏ ಲಾರಿಯಲ್ಲಿ ಸಾಗಿಸುತ್ತಿದ್ದ ಅಂದಾಜು ಮೌಲ್ಯ 29.70.000/- ರೂಗಳ ಒಟ್ಟು 1100 ಸಂಖ್ಯೆಯ  ನಾನ್ ಸ್ಟಿಕ್ ದೋಸಾ ತವಾ ಗಳನ್ನು ವಶಪಡಿಸಿಕೊಳ್ಳಲಾಗಿದೆ.

2. ದಿನಾಂಕ 22/03/2023 ರಂದು ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಸಾಗಿಸುತ್ತಿದ್ದ ಅಂದಾಜು ಮೌಲ್ಯ 8,00,000/- ರೂಗಳ ಒಟ್ಟು 30 ಟನ್ ತೂಕದ ಬೇಳೆ, ರವೆ, ಗೋಧಿ ಮತ್ತು ಇತರೆ ಆಹಾರ ಸಾಮಗ್ರಿಗಳು ತುಂಬಿದ್ದ 1,000/- ಬ್ಯಾಗ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.


3. ದಿನಾಂಕ 22/03/2023 ರಂದು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಸಾಗಿಸಿತ್ತಿದ್ದ ಅಂದಾಜು ಮೌಲ್ಯ 7,00,000/ ರೂಗಳ ಒಟ್ಟು 10 ಟನ್ 504 ಕೆಜಿ ತೂಕದ ಅಕ್ಕಿ ತುಂಬಿದ್ದ 404 ಚೀಲಗಳನ್ನು ವಶಪಡಿಸಿಕೊಳ್ಳಲಾಗಿದೆ.

4. ದಿನಾಂಕ 22/03/2023 ರಂದು ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೆ ಸಂಗ್ರಹಿಸ್ಪಟ್ಟಿದ್ದ ಅಂದಾಜು ಮೌಲ್ಯ 10,00,000/- ರೂ ಗಳ ಬಟ್ಟೆ, ಸೀರೆ, ಇಡ್ಲಿ ಕುಕ್ಕರ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದರೊಂದಿಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿ, ದಿನಾಂಕ 22/03/2023 ರಂದು ಅಂದಾಜು ಮೌಲ್ಯ 17,507/-ರೂ ಗಳ ಒಟ್ಟು 25 ಲೀಟರ್ 608 ಮಿಲಿ ಅಕ್ರಮ ಮದ್ಯವನ್ನು ಅಮಾನತ್ತು ಪಡಿಸಿಕೊಂಡು ಆರೋಪಿತರ ವಿರುದ್ದ ಕರ್ನಾಟಕ ಅಬಕಾರಿ ಕಾಯ್ದೆಯಡಿ ಒಟ್ಟು 8 ಪ್ರಕರಣಗಳನ್ನು ದಾಖಲಿಸಿ ಕಾನೂನು ರೀತ್ಯಾ ಕ್ರಮ ಕೈಗೊಂಡಿರುತ್ತಾರೆ.


Post a Comment

Previous Post Next Post