ಶಿವಮೊಗ್ಗದಲ್ಲಿ ಬಿಜೆಪಿಗೆ ಮುಸಲ್ಮಾನರ ಮತಗಳು ಬೇಕಿಲ್ಲ: ಕೆ ಎಸ್ ಈಶ್ವರಪ್ಪ

 ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿಗೆ ಮುಸ್ಲಿಮರ ಮತ ಬೇಕಿಲ್ಲ, ರಾಷ್ಟ್ರವಾದಿ ಮುಸ್ಲಿಮರು ಕೇಸರಿ ಪಕ್ಷಕ್ಕೆ ಮತ ಹಾಕುತ್ತಾರೆ ಎಂದು ಬಿಜೆಪಿ ಹಿರಿಯ ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

                                                                      ಕೆ ಎಸ್ ಈಶ್ವರಪ್ಪ

By : Rekha.M
Online Desk

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿಗೆ ಮುಸ್ಲಿಮರ ಮತ ಬೇಕಿಲ್ಲ, ರಾಷ್ಟ್ರವಾದಿ ಮುಸ್ಲಿಮರು ಕೇಸರಿ ಪಕ್ಷಕ್ಕೆ ಮತ ಹಾಕುತ್ತಾರೆ ಎಂದು ಬಿಜೆಪಿ ಹಿರಿಯ ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ನಿನ್ನೆ ಸೋಮವಾರ ಬಿಜೆಪಿ ಆಯೋಜಿಸಿದ್ದ ವೀರಶೈವ-ಲಿಂಗಾಯತ ಸಮಾವೇಶದಲ್ಲಿ ಮಾತನಾಡಿದ ಅವರು, ಜನರು ಕೇವಲ ಅಭಿವೃದ್ಧಿ ವಿಚಾರದಲ್ಲಿ ಚಕಾರ ಎತ್ತದೇ ಮತಾಂತರದ ಬಗ್ಗೆ ಕೂಡ ಚಿಂತಿಸಬೇಕು ಎಂದರು. 

ಶಿವಮೊಗ್ಗ ಕ್ಷೇತ್ರದಲ್ಲಿ 50 ಸಾವಿರದಿಂದ 55 ಸಾವಿರ ಮುಸ್ಲಿಂ ಮತದಾರರಿದ್ದಾರೆ ಎಂದು ಹೇಳುತ್ತಾರೆ. ನಮಗೆ ಒಂದೇ ಒಂದು ಮುಸ್ಲಿಂ ಮತವೂ ಬೇಕಾಗಿಲ್ಲ ಎಂದು ನೇರವಾಗಿ ಹೇಳುತ್ತಿದ್ದೇನೆ ಎಂದರು. 

ಮುಸ್ಲಿಮರಿಗೆ ಆರೋಗ್ಯ ಅಥವಾ ಶೈಕ್ಷಣಿಕ ಸಮಸ್ಯೆಗಳಿದ್ದಾಗ ನಾವು ಅವರಿಗೆ ಹೆಚ್ಚಿನ ಸಹಾಯ ಮಾಡಿದ್ದರಿಂದ ನಮಗೆ ಮುಸ್ಲಿಂ ಮತಗಳ ಅಗತ್ಯವಿಲ್ಲ ಮತ್ತು ಬಿಜೆಪಿ ಮೇಲೆ ನಿಜವಾದ ಪ್ರೀತಿ ಇರುವ ಮುಸ್ಲಿಮರು ನಮಗೆ ಮತ ಹಾಕುತ್ತಾರೆ ಎಂದರು.

ಲಿಂಗಾಯತರು ಸೇರಿದಂತೆ ಹಿಂದೂಗಳಿಗೆ ಯಡಿಯೂರಪ್ಪ ಮಾದರಿ ನಾಯಕ. ಅವರು ನಿಜವಾದ ಹಿಂದೂ ಮತ್ತು ಪಕ್ಷದ ಅಭ್ಯರ್ಥಿ ಚನ್ನಬಸಪ್ಪ ನಗರದಲ್ಲಿ ಹಿಂದೂ ಸಮಾಜವನ್ನು ಕಟ್ಟಬಲ್ಲ ನಾಯಕ. ಬೇರೆ ಯಾವುದೇ ಪಕ್ಷ ಗೆದ್ದರೆ ಹಿಂದೂಗಳಿಗೆ ಇಲ್ಲಿ ಭದ್ರತೆ ಇರುವುದಿಲ್ಲ ಎಂದು ಅನೇಕರು ನನ್ನ ಬಳಿ ಹೇಳುತ್ತಿದ್ದಾರೆ.

ಪ್ರತಿಪಕ್ಷಗಳು ಮುಸ್ಲಿಂ ಮತ ಪಡೆಯಲು ಹಿಂದೂ-ಮುಸ್ಲಿಂ ಎಂದು ವಿಭಜಿಸುತ್ತಿವೆ. ಹಿಂದೂಗಳನ್ನು ಕೀಳು ಮತ್ತು ಮುಸ್ಲಿಮರನ್ನು ಮೇಲುಗೈ ಮಾಡಲು ನಾವು ಬಿಡುವುದಿಲ್ಲ. ಕೆಲವು ರಾಷ್ಟ್ರೀಯವಾದಿ ಮುಸ್ಲಿಮರು ಖಂಡಿತವಾಗಿಯೂ ಬಿಜೆಪಿಗೆ ಮತ ಹಾಕುತ್ತಾರೆ. ಕಾಂಗ್ರೆಸ್ ಜೊತೆ ಗುರುತಿಸಿಕೊಳ್ಳುವ ದೇಶವಿರೋಧಿಗಳು ಹೀಗೆಯೇ ಮುಂದುವರಿಯಲಿ. ಜಾತಿಯ ಹೆಸರಿನಲ್ಲಿ ಹಿಂದೂಗಳನ್ನು ವಿಭಜಿಸುವಲ್ಲಿ ಎಲ್ಲರೂ ವಿಫಲರಾಗಿದ್ದಾರೆ ಎಂದರು.

Post a Comment

Previous Post Next Post