ಶಿವಮೊಗ್ಗ: ಮಾರಾಟ ಮಾಡಿದ ದ್ವಿಚಕ್ರ ವಾಹನದ ಹಣ ಕೇಳಿದ ಕಾರಣ ಗನ್ ಬಳಸಿ ಮಾರಣಾಂತಿಕ ಹಲ್ಲೆ: ವಿಚಾರಣೆ ವೇಳೆ ಅಕ್ರಮವಾಗಿ ಸಂಗ್ರಹಿಸಿದ್ದ ಶಸ್ತ್ರಾಸ್ತ್ರ ವಶ.

 ಮೊಹಮ್ಮದ್ ರಿಯಾಬ್, 24 ವರ್ಷ, ಅಣ್ಣಾನಗರ, ಶಿವಮೊಗ್ಗ ಈತನು ತನ್ನ ಪರಿಚಯಸ್ಥ ಅಜರ್ ನಿಗೆ ದ್ವಿಚಕ್ರ ವಾಹನವನ್ನು ಮಾರಾಟ ಮಾಡಿದ್ದು, ಅಜರ್ ನು ಬೈಕ್ ನ ಹಣವನ್ನು ಕೊಡದೇ ಸತಾಯಿಸುತ್ತಿದ್ದು, ದಿನಾಂಕ 08-04-2023 ರಂದು ದೊಡ್ದಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಇಲಿಯಾಜ್ ನಗರದ ನ್ಯಾಮತ್ ಶಾದಿ ಮಹಲ್ ಬಳಿ ಅಜರ್ ನಿಂತಿದ್ದಾಗ ಬೈಕ್ ನ ಹಣವನ್ನು ಕೊಡು ಎಂದು ಮೊಹಮ್ಮದ್ ರಿಯಾಬ್ ನು ಕೇಳಿದ್ದಕ್ಕೆ, ಆತನನ್ನು ಕೊಲೆ ಮಾಡುವ ಉದ್ದೇಶದಿಂದ ಅಜರ್ ನು ತನ್ನ ಬಳಿ ಇದ್ದ ಗನ್ ನ ಹಿಂಭಾಗದಿಂದ, ತಲೆ ಮತ್ತು ಮೈ ಕೈಗೆ ಹೊಡೆದು ಮಾರಣಾಂತಿಕ ಹಲ್ಲೆ ಮಾಡಿ, ಗನ್ ತೋರಿಸಿ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿರುತ್ತಾನೆಂದು ನೀಡಿದ ದೂರಿನ ಮೇರೆಗೆ ಗುನ್ನೆ ಸಂಖ್ಯೆ 0118/2023 ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ ಮತ್ತು ಮಾರಣಾಂತಿಕ ಹಲ್ಲೆ ಪ್ರಕರಣ ದಾಖಲಿಸಲಾಗಿರುತ್ತದೆ.



ಸದರಿ ಪ್ರಕರಣದ ಆರೋಪಿತನ ಪತ್ತೆ ಬಗ್ಗೆ ಶ್ರೀ ಮಿಥುನ್ ಕುಮಾರ್ ಜಿ.ಕೆ, ಐಪಿಎಸ್ ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ಅನಿಲ್ ಕುಮಾರ್ ಭೂಮರೆಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರ ಮಾರ್ಗದರ್ಶನದಲ್ಲಿ, ಶ್ರೀ ಬಾಲರಾಜ್ ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ-ಎ ಉಪ ವಿಭಾಗ ರವರ ಮೇಲ್ವಿಚಾರಣೆಯಲ್ಲಿ, ಶ್ರೀ ಅಂಜನ್ ಕುಮಾರ್ ಪೊಲೀಸ್ ನಿರೀಕ್ಷಕರಿ, ದೊಡ್ಡಪೇಟೆ ಪೊಲೀಸ್ ಠಾಣೆ ರವರ ನೇತೃತ್ವದಲ್ಲಿ, ಶ್ರೀ ಮಂಜುನಾಥ್, ಎಎಸ್ಐ, ಪೂರ್ವ ಸಂವಾರಿ ಪೊಲೀಸ್ ಠಾಣೆ, ಶಿವಮೊಗ್ಗ, ದೊಡ್ಡಪೇಟೆ ಪೊಲೀಸ್ ಠಾಣೆಯ ಎಎಸ್ಐ ಶ್ರೀ ಚೂಡಮಣಿ, ಪಿಸಿ ರಮೇಶ್ ಮತ್ತು ರೌಡಿ ನಿಗ್ರಹ ದಳದ ಸಿಬ್ಬಂಧಿಗಳಾದ ಹೆಚ್.ಸಿ ಹಾಲಪ್ಪ, ಅಶೋಕ ಮತ್ತು ಮನೋಹರ್ ಹಾಗೂ ಸಿಪಿಸಿ ಗುರುನಾಯ್ಕ್, ನಾಗಪ್ಪ ಹರೀಶ್ ನಾಯ್ಕ್, ವಸಂತ, ರಮೇಶ್, ಆಕಾಶ್, ಶರತ್ ಮತ್ತು ತಮ್ಮಣ್ಣ ರವರುಗಳನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚನೆ ಮಾಡಲಾಗಿರುತ್ತದೆ.

ಸದರಿ ತನಿಖಾ ತಂಡವು ಈ ದಿನ ದಿನಾಂಕ 10-04-2023 ರಂದು ಸದರಿ ಪ್ರಕರಣದ ಆರೋಪಿತನಾದ ಅಜರ್ @ ಮೊಹಮ್ಮದ್ ಅಜರ್,25 ವರ್ಷ, 3 ನೇ ಕ್ರಾಸ್ ಇಲಿಯಾಜ್ ನಗರ, ಶಿವಮೊಗ್ಗ ಈತನನ್ನು ದಸ್ತಗಿರಿ ಮಾಡಿ, ವಿಚಾರಣೆಗೊಳಪಡಿಸಿದ್ದು, ತಾನು ಅಕ್ರಮವಾಗಿ ಶಸ್ತ್ರಾಸ್ತ್ರ ವನ್ನು ಹೊಂದಿರುವುದಾಗಿ ಮಾಹಿತಿ ನೀಡಿದ ಮೇರೆಗೆ, ಆರೋಪಿತನಿಂದ ಒಂದು ಕಂಟ್ರಿ ಮೇಡ್ ಪಿಸ್ತೂಲ್, ಒಂದು ಮೇಡ್ ಇನ್ ಬೆಂಗಳೂರು ಇಂಡಿಯಾ ಏರ್ ಗನ್ ಗುಂಡುಗಳು, 100 ಎಂಎಲ್ ನ ಡ್ರಗ್ ಮಿಶ್ರಿತವಿರುವ ಮೋನೋಕಾಫ್ ಪ್ಲಸ್ ನ ಒಟ್ಟು 156 ಬಾಟಲಿಗಳನ್ನು ಅಮಾನತ್ತು ಪಡಿಸಿಕೊಂಡಿರುತ್ತಾರೆ.

ಸದರಿ ತನಿಖಾ ತಂಡವು ಉತ್ತಮ ಕಾರ್ಯವನ್ನು ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆರವರು ಪ್ರಶಂಸಿಸಿ ಅಭಿನಂದಿಸಿರುತ್ತಾರೆ.


Post a Comment

Previous Post Next Post