ರಾಜ್ಯದಲ್ಲಿ ಬರ, ಪ್ರವಾಹ ಪರಿಸ್ಥಿತಿ ನಿಭಾಯಿಸಲು ಕೃಷ್ಣ ಭೈರೇಗೌಡ ನೇತೃತ್ವದ ಸಚಿವ ಸಂಪುಟ ಉಪ ಸಮಿತಿ ರಚನೆ

 ರಾಜ್ಯದಲ್ಲಿ ಬರ, ಪ್ರವಾಹ ಮತ್ತು ಇತರೆ ನೈಸರ್ಗಿಕ ವಿಕೋಪಗಳಿಂದ ಉದ್ಬವಿಸಬಹುದಾದ ಪರಿಸ್ಥಿತಿ ಪರಾಮರ್ಶಿಸಲು ಮತ್ತು ಇದನ್ನು ಸಮರ್ಥವಾಗಿ ನಿಭಾಯಿಸಲು  ಕಂದಾಯ ಸಚಿವ ಕೃಷ್ಣ ಭೈರೇಗೌಡ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ಉಪ ಸಮಿತಿಯನ್ನು ರಚಿಸಲಾಗಿದೆ.

                                              ಕಂದಾಯ ಸಚಿವ ಕೃಷ್ಣಭೈರೇಗೌಡ

Posted By : Rekha.M
Source : Online Desk

ಬೆಂಗಳೂರು: ರಾಜ್ಯದಲ್ಲಿ ಬರ, ಪ್ರವಾಹ ಮತ್ತು ಇತರೆ ನೈಸರ್ಗಿಕ ವಿಕೋಪಗಳಿಂದ ಉದ್ಬವಿಸಬಹುದಾದ ಪರಿಸ್ಥಿತಿ ಪರಾಮರ್ಶಿಸಲು ಮತ್ತು ಇದನ್ನು ಸಮರ್ಥವಾಗಿ ನಿಭಾಯಿಸಲು  ಕಂದಾಯ ಸಚಿವ ಕೃಷ್ಣ ಭೈರೇಗೌಡ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ಉಪ ಸಮಿತಿಯನ್ನು ರಚಿಸಲಾಗಿದೆ.

ಲೋಕೋಪಯೋಗ ಸಚಿವ ಸತೀಶ್ ಜಾರಕಿಹೊಳಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್, ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಮತ್ತು ಸಹಕಾರ ಸಚಿವ ಎನ್ ರಾಜಣ್ಣ ಈ ಸಮಿತಿಯ ಸದಸ್ಯರಾಗಿದ್ದಾರೆ.

ನೈಸರ್ಗಿಕ ವಿಕೋಪಗಳಂತಹ ಸಂದರ್ಭದಲ್ಲಿ ನೀತಿ ನಿರೂಪಣೆ ರಚನೆ ಹಾಗೂ ತೆಗೆದುಕೊಳ್ಳಬೇಕಾದ ಕ್ರಮಗಳು, ಅಗತ್ಯ ನಿರ್ದೇಶನಗಳನ್ನು ಸಚಿವ ಸಂಪುಟದ ಉಪ ಸಮಿತಿ ನೀಡಲಿದೆ. 


Post a Comment

Previous Post Next Post