ಶಿವಮೊಗ್ಗ: ಮನೆಯ ಹಿಂಬದಿ ಜಾಗದಲ್ಲಿ ಮಾದಕ ವಸ್ತು ಗಾಂಜಾ ಗಿಡಗಳ ಬೆಳೆ; ಆರೋಪಿ ವಿರುದ್ಧ ಪ್ರಕರಣ ದಾಖಲು.!


ಮಾದಕ ವಸ್ತು ಗಾಂಜಾ ಮಾರಾಟಗಾರರ ವಿರುದ್ಧ ಕ್ರಮ ಜರುಗಿಸುವ ನಿಟ್ಟಿನಲ್ಲಿ ವಿಶೇಷ ಕಾರ್ಯಾಚರಣೆಯನ್ನು ಕೈಗೊಂಡಿದ್ದು,  ಈ ಹಿನ್ನೆಲೆಯಲ್ಲಿ, ದಿನಾಂಕ  28-12-2023 ರಂದು ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಳಲಿಕೊಪ್ಪ ಗ್ರಾಮದ ವಾಸಿ ನಜರತ್ ನು ತನ್ನ ಮನೆಯ ಹಿಂಬದಿ ಜಾಗದಲ್ಲಿ ಮಾದಕ ವಸ್ತು ಗಾಂಜಾ ಗಿಡಗಳನ್ನು ಬೆಳೆದಿರುತ್ತಾರೆಂದು, ಬಂದ ಖಚಿತ ಮಾಹಿತಿಯ ಮೇರೆಗೆ, ಶ್ರೀ ಮಿಥುನ್ ಕುಮಾರ್ ಜಿಕೆ, ಐಪಿಎಸ್ ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ಅನಿಲ್ ಕುಮಾರ್ ಭೂಮರಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರ ಮಾರ್ಗದರ್ಶನದಲ್ಲಿ, ಶ್ರೀ ಬಾಲರಾಜ್ ಪೊಲೀಸ್ ಉಪಾಧೀಕ್ಷಕರು ಶಿವಮೊಗ್ಗ-ಎ, ಉಪ ವಿಭಾಗ, ಮತ್ತು ಶ್ರೀ ಮಂಜುನಾಥ ಪೊಲೀಸ್ ನಿರೀಕ್ಷಕರು ತುಂಗಾನಗರ ಪೊಲೀಸ್ ಠಾಣೆರವರ ನೇತೃತ್ವದ, ಶ್ರೀ ಮಂಜುನಾಥ್, ಪೋಲಿಸ್ ಉಪನಿರೀಕ್ಷಕರು ತುಂಗಾ ನಗರ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಗಳ ತಂಡವು ಸ್ಥಳಕ್ಕೆ ಹೋಗಿ ದಾಳಿ ನಡೆಸಿದಾಗ ನಜರತ್ @ ನಜ್ರು, ಈತನು ಗಾಂಜಾ ಗಿಡವನ್ನು ಬೆಳೆದಿರುವುದು ಕಂಡುಬಂದಿದ್ದು, ನಂತರ ಸ್ಥಳದಲ್ಲಿದ್ದ ಅಂದಾಜು ಮೌಲ್ಯ 1,20,00/- ರೂ ಗಳ 12 ಕೆಜಿ 350 ಗ್ರಾಂ ತೂಕದ ಹಸಿ ಗಾಂಜಾ ಗಿಡವನ್ನು  ಅಮಾನತುಪಡಿಸಿಕೊಂಡು, ಆರೋಪಿ ನಜರತ್ @ ನಜ್ರು, ಮಳಲಿಕೊಪ್ಪ ಗ್ರಾಮ ಶಿವಮೊಗ್ಗ ಈತನ ವಿರುದ್ಧ ತುಂಗಾನಗರ ಪೊಲೀಸ್ ಠಾಣೆ ಗುನ್ನೆ ಸಂಖ್ಯೆ  0516/2023 ಕಲಂ 8(ಬಿ), 20 (ಎ)(i), 25 NDPS ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತದೆ.

Post a Comment

Previous Post Next Post