ಹುಬ್ಬಳಿಯಲ್ಲಿ ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ವಿಚಾರ; ಕೆ.ಎಸ್.ಈಶ್ವರಪ್ಪ, ಪ್ರಮುಖರಾದ ಹರತಾಳು ಹಾಲಪ್ಪ, ಚನ್ನಬಸಪ್ಪ, ಭಾನುಪ್ರಕಾಶ್, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಮತ್ತಿತರ ಬಂಧನ!

 ಹುಬ್ಬಳಿಯಲ್ಲಿ ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ವಿಚಾರ. ಬಂಧನ ಖಂಡಿಸಿ, ಶಿವಮೊಗ್ಗ ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ. ಶಿವಮೊಗ್ಗದ ಅಶೋಕ್ ವೃತ್ತದಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ.



ರಾಜ್ಯ ಸರ್ಕಾರದ ಧೋರಣೆ ಖಂಡಿಸಿ, ಪ್ರತಿಭಟನೆ. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಬಿಜೆಪಿ ಪ್ರತಿಭಟನೆ. ನಮ್ಮನ್ನು ಬಂಧಿಸಿ ಎಂದು ಆಗ್ರಹಿಸಿ ಪ್ರತಿಭಟನೆ. ಪ್ರತಿಭಟನೆಯಲ್ಲಿ ಕೆ.ಎಸ್. ಈಶ್ವರಪ್ಪ, ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ, ಜಿಲ್ಲಾಧ್ಯಕ್ಷ ಟಿ.ಡಿ ಮೇಘರಾಜ್ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗಿ.

ಬಸ್ ನಿಲ್ದಾಣ ಸಮೀಪದ ಅಶೋಕ  ಸರ್ಕಲ್ ಬಳಿ ಪೊಲೀಸ್ ಬಿಗಿ ಭದ್ರತೆ. ಕರಸೇವಕ ಪೂಜಾರಿ ಬಂಧನ ಹಿನ್ನೆಲೆ ಶಿವಮೊಗ್ಗ ಎಸ್ಪಿ ಕಚೇರಿಗೆ ನುಗ್ಗಿದ ಬಿಜೆಪಿ ಕಾರ್ಯಕರ್ತರು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಶಾಸಕ ಎಸ್.ಎನ್.ಚನ್ನಬಸಪ್ಪ, ಮಾಜಿ ಎಂಎಲ್ಸಿ ಭಾನುಪ್ರಕಾಶ್ ನೇತೃತ್ವದಲ್ಲಿ ನುಗ್ಗಿದ ಕಾರ್ಯಕರ್ತರು ಕಾರ್ಯಕರ್ತರನ್ನು ಗೇಟ್ ಬಳಿ ತಡೆಯಲು ವಿಫಲವಾದ ಪೊಲೀಸರು ಗೇಟ್ ನಿಂದ ನುಗ್ಗಿ ಎಸ್ಪಿ ಕಚೇರಿ ಪ್ರವೇಶ ದ್ವಾರಕ್ಕೆ ನುಗ್ಗಿದ ಕಾರ್ಯಕರ್ತರು.

ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿದ ಪೊಲೀಸರುಕೆ.ಎಸ್.ಈಶ್ವರಪ್ಪ, ಪ್ರಮುಖರಾದ ಹರತಾಳು ಹಾಲಪ್ಪ, ಚನ್ನಬಸಪ್ಪ, ಭಾನುಪ್ರಕಾಶ್, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಮತ್ತಿತರ ಬಂಧನ ನೂರಾರು ಸಂಖ್ಯೆಯಲ್ಲಿ ಎಸ್ಪಿ ಕಚೇರಿ ಎದುರು‌ ಜಮಾಯಿಸಿರುವ ಕಾರ್ಯಕರ್ತರು ರಾಮ ಭಜನೆ ಮಾಡಿ ಪ್ರತಿಭಟನೆ ನಡೆಸುತ್ತಿರುವ ಕಾರ್ಯಕರ್ತರು. ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತಿರುವ ಕಾರ್ಯಕರ್ತರು. ಕಳ್ಳ ಕಳ್ಳ ಸಿದ್ದರಾಮಯ್ಯ ಎಂದು ಕೂಗುತ್ತಿರುವ ಕಾರ್ಯಕರ್ತರು.

Post a Comment

Previous Post Next Post