ಈಗ ಯಾರಾದ್ರೂ ರಾಮ ಮಂದಿರ ಕೆಡವಿ ಮಸೀದಿ ಕಟ್ಟಿದರೆ ಅವರಪ್ಪನಿಗೆ ಹುಟ್ಟಿದೋನು ಅಂತೀನಿ: ಕೆ ಎಸ್ ಈಶ್ವರಪ್ಪ

 ಬೆಳಗಾವಿ: 500 ವರ್ಷದ ಕೆಳಗೆ ರಾಮ ಹುಟ್ಟಿದ ಜಾಗದಲ್ಲಿ ದೇವಸ್ಥಾನ ಕಿತ್ತು ಹಾಕಿದ್ರು, ಬಾಬರ್ ನಂತವನು ಬಂದು ಬಾಬ್ರಿ ಮಸೀದಿ ಕಟ್ಟಿ ಬಾಬ್ರಿ ಮಸೀದಿ ಅಂದ್ರೆ ಹೇಗೆ? ಈಗ ಯಾರಾದ್ರೂ ಮಂದಿರ ಕೆಡವಿ ಮಸೀದಿ ಕಟ್ಟಿದರೆ ಅವರಪ್ಪನಿಗೆ ಹುಟ್ಟಿದೋನು ಅಂತ ಕರೆಯುತ್ತೇನೆ ಎಂದು ಹಿಂದೂ ಕಾರ್ಯಕರ್ತರ ಸಮಾವೇಶದಲ್ಲಿ ಕೆ ಎಸ್ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ.


ವಿಶ್ವನಾಥ ದೇವಸ್ಥಾನದಲ್ಲಿ ಅರ್ಧ ಮಸೀದಿ ಹೇಗೆ ಬಂತು? ಮಥುರಾದಲ್ಲಿ ಅರ್ಧ ಮಸೀದಿ ಹೇಗೆ ಬಂತು? ಇನ್ನೆರಡು ದೇವಸ್ಥಾನಗಳಿಗೆ ಕೋರ್ಟ್ ಆದೇಶ ನೀಡಿದೆ. ಅಲ್ಲಿರುವ ಮಸೀದಿಗಳು ಧ್ವಂಸ ಆಗುತ್ತೆ ದೇವಸ್ಥಾನ ತಲೆ ಎತ್ತುತ್ತೆ. ದೇವಸ್ಥಾನ ಒಡೆದು ಮಸೀದಿ ಕಟ್ಟಿದ ಮುಸ್ಲಿಂಮರು ನೀವಾಗಿ ನೀವೆ ಕಿತ್ತು ಹಾಕಿ. ಇಲ್ಲವಾದ್ರೆ ರಾಮನ ಭಕ್ತರು ನಾವು ಮಸೀದಿ ಕಿತ್ತು ಹಾಕ್ತಿವಿ ಎಂದು ಎಚ್ಚರಿಕೆ ನೀಡಿದರು.

ಸಿದ್ದರಾಮಯ್ಯ ನಾವು ಜಾತ್ಯಾತೀತವಾದಿಗಳು ಅಂತಾರೆ. ನಾವು ನಿಮಗಿಂತ ಜಾತ್ಯಾತೀತವಾದಿಗಳು. ಹಿಂದೂ ಮುಸ್ಲಿಂ ಅನ್ಯೋನ್ಯವಾಗಿರಬೇಕು ಎನ್ನುವವರು ನಾವು. ನೀವು ನಮಾಜ್ ಮಾಡ್ಕೊಳ್ಳಿ ನಾವು ಅದರ ಗೊಡವೆಗೆ ಬರಲ್ಲ. ಬಾಬರ್ ಕಟ್ಟಡ ಈ ದೇಶದ ಜನರಿಗೆ ನೀವು ಗುಲಾಮರಾಗಿದ್ದಿರಿ ಎಂದು ಹೇಳ್ತಿತ್ತು. ನೀವಾಗಿ ನೀವೆ ಮಥುರಾ ಹಾಗೂ ಕೃಷ್ಣಾದ ಮಸೀದಿ ತಗೆಯಿರಿ. ತೆಗೆಯದಿದ್ದರೆ ಕೊಲೆಗಳಾಗುತ್ತೊ ಇನ್ನೇನಾಗುತ್ತೊ ಗೊತ್ತಿಲ್ಲ' ಎಂದರು.

ಈ ದೇಶದಲ್ಲಿ ಈಗಾಗಲೇ ತ್ರಿಬಲ್ ತಲಾಕ್ ರದ್ದಾಗಿದೆ. ಒಂದು ಗಂಡಿಗೆ ಒಂದು ಹೆಣ್ಣು ಎಂಬ ಸಂದೇಶ ಸಾರಲಾಗಿದೆ. ನಮಗೆ ಒಂದು ಹೆಣ್ಣು ಒಂದು ಗಂಡು ಇತ್ತು ಆದರೆ ಮುಸ್ಲಿಂಮರಿಗೆ ಹಮ್ ಪಾಚ್ ಹಮ್ಕೊ ಪಚ್ಚಿಸ್ ಎಂಬಂತಾಗಿತ್ತು. ಹಾಗಾಗಿಯೇ ತ್ರಿವಳಿ ತಲಾಖ್ ತಂದಿದ್ದೇವೆ ಎಂದರು.

ಚುನಾವಣೆ ಬಂದ್ರೆ ರಾಮಮಂದಿರ ಬಿಜೆಪಿಯವರಿಗೆ ನೆನಪಾಗುತ್ತೆ ಎನ್ನುವ ಕಾಂಗ್ರೆಸ್ ವಾದಕ್ಕೆ ಪ್ರತಿಯಾಗಿ, ನಾವು ಈಗ ರಾಮಮಂದಿರ ಕಟ್ಟಿದ್ದೇವೆ. ಈಗ ರಾಮಮಂದಿರ ಕಟ್ಟಿದ್ದೇವೆ ಅಂತ ರಾಮರಾಜ್ಯ ಯಾವಾಗ ಆಗುತ್ತೆ ಅಂತ ಪ್ರಶ್ನೆ ಕೇಳ್ತಾರೆ.

ದೇಶವನ್ನು ಒಡೆದು ಛಿದ್ರ ಮಾಡಿದರು. ಹಿಂದೂಸ್ಥಾನ ಪಾಕಿಸ್ತಾನ ಅಂತ ಮಾಡಿದರು. ದೆಹಲಿಗೆ ಹೋಗಿ ಗಾಂಧಿ ಸಮಾಧಿ ನೋಡಿ. ಅಲ್ಲಿ ಹೇ ಏಸು, ಹೇ ಅಲ್ಲಾ ಅಂತ ಬರೆದಿಲ್ಲ ಅಲ್ಲಿ ಹೇ ರಾಮ್ ಅಂತ ಬರೆದಿದೆ. ವರ್ಷಕ್ಕೊಂದು ಬಾರಿ ಶಾಸಕರನ್ನು ಟೂರ್ ಕಳಿಸ್ತಾರೆ. ಅಯೋಧ್ಯೆಗೆ ಹೋದೆವು. ಕಾಶಿ ವಿಶ್ವನಾಥನಿಗೆ ಹೋದೆವು. ಅಲ್ಲಿ ಅರ್ಧ ಮಸೀದಿ ಇದೆ. ವಿಶ್ವನಾಥನ ಮಂದಿರ ಒಡೆದು ಮಸೀದಿ ಇದೆ ಎಂದು ಕಾಂಗ್ರೆಸ್ ಎಂ ಎಲ್ ಎ ಹೇಳಿದ್ರು. ಹೊಸ ಗೋಡೆ ಇದೆ ಅದನ್ನ ನೀವು ಫೋಟೊ ಹೊಡೆದು ಅಸೆಂಬ್ಲಿಯಲ್ಲಿ ಮಾತಾಡಿ ಎಂದಿದ್ದರು. ನಾನ್ಯಾಕೆ ನೀವೇ ಮಾತಾಡಿ ಎಂದಿದ್ದಕ್ಕೆ ನನ್ನ ಕ್ಷೇತ್ರದಲ್ಲಿ ಮುಸ್ಲಿಂ ಮತಗಳು ಇವೆ. ಅದಕ್ಕಾಗಿ ನಾನು ಮಾತಾಡಲ್ಲ ಎಂದಿದ್ದರು. ಕಾಂಗ್ರೆಸ್‌ನವರು ಮತಕ್ಕಾಗಿ ಹಿಂದೆ ಸರಿಯುತ್ತಾರೆ' ಎಂದರು.

ಸಮಾಜವಾದಿ ಎನ್ನುವ ಸಿದ್ದರಾಮಯ್ಯಗೆ ಅವರ ಥರದ ಮಗನೇ ಹುಟ್ಟಿದ್ದಾನೆ. ಹಿಂದೂರಾಷ್ಟ್ರ ಮಾಡುವ ಜನಗಳು ಎಂ ಎಲ್ ಎ ಆಗಬೇಕು. ಸ್ವಾಮೀ ವಿವೇಕಾನಂದರು ಹೊರ ದೇಶಕ್ಕೆ ಹೋದಾಗ ಅವರನ್ನ ಗಣನೆಗೆ ತೆಗೆದುಕೊಂಡಿರಲಿಲ್ಲ. ನಂತರ ಅವರ ಮಾತಿನಿಂದ ಎಲ್ಲರೂ ಅವರನ್ನು ಗೌರವದಿಂದ ಕಾಣಲು ಶುರುಮಾಡಿದರು. ಅಂತಹ ಧರ್ಮ ಅಂತಹ ಸಂಸ್ಕೃತಿ ನಮ್ಮದು ಎಂದರು.

Post a Comment

Previous Post Next Post